ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಾಜ್ಯಪಾಲ

ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಾಜ್ಯಪಾಲ ತಾವರ್ ಚಂದ್ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದರು. ಕಟೀಲು ದೇವಿಗೆ 3ಸೀರೆಗಳನ್ನು ಸಮರ್ಪಿಸಿದರು. ಬಳಿಕ ನಂದಿನಿ ನದಿ, ದೇವಸ್ಥಾನದ ಗೋಶಾಲೆಗೆ ಭೇಟಿ ನೀಡಿ ಕಪಿಲೆ ದನಕ್ಕೆ ಹಣ್ಣು ಹಿಂಡಿ ನೀಡಿದರು .ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಅನುವಂಶಿಕ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಅನುವಂಶಿಕ ಅರ್ಚಕ ವಾಸುದೇವ ಆಸ್ರಣ್ಣ, ಅರ್ಚಕರಾದ ಹರಿನಾರಾಯಣ, ಲಕ್ಷ್ಮೀನಾರಾಯಣ ಆಸ್ರಣ್ಣ, ಕಮಲಾದೇವಿ ಅಸ್ರಣ್ಣ, ಬಿಪಿನ್ ಪ್ರಸಾದ್ ಶೆಟ್ಟಿ ಕೊಡೆತ್ತೂರು ಗುತ್ತು, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಆದರ್ಶ್ ಶೆಟ್ಟಿ ಎಕ್ಕಾರು, ಭಾಸ್ಕರದಾಸ್ ಎಕ್ಕಾರು, ಮುಲ್ಕಿ ಠಾಣಾಧಿಕಾರಿ ಕುಸುಮಾಧರ ಮತ್ತಿತರರು ಉಪಸ್ಥಿತರಿದ್ದರು

Leave a Reply