ಡಿಕೆ ಡಿಸಿ ಮಾನವೀಯತೆ

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ರಭಸದಲ್ಲಿ ತುಮಕೂರು ಜಿಲ್ಲೆಯವರಿಗೆ ಸೇರಿದ ಕಾರು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದ್ದು, ಕಾರಿನಲ್ಲಿ ನಾಲ್ಕು ಜನ ಇದ್ದು ಅದಲ್ಲಿ ಮಹಿಳೆಯ ತಲೆಗೆ ಗಾಯವಾಗಿತ್ತು. ಅದೇ ದಾರಿಯಲ್ಲಿ ಚಾರ್ಮಾಡಿ ಕಡೆ ಹೋಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸ್ಥಳಕ್ಕೆ ಹೋಗಿ ವಿಚಾರಿಸಿದಾಗ ಮಹಿಳೆ ಮಮತಾ ಅವರ ತಲೆಗೆ ಗಾಯವಾಗಿತ್ತು. ತಕ್ಷಣ ಜೊತೆಯಲ್ಲಿದ್ದ ಬೆಳ್ತಂಗಡಿ ತಹಶೀಲ್ದಾರ್ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ ಡಿಸಿ ಮಾನವೀಯತೆ ಮೆರೆದಿದ್ದಾರೆ.

Leave a Reply