ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತುಹಾಕಲು ಸಮಾಜದ ಸಹಕಾರ ಮುಖ್ಯ – ಶಾಸಕ ಡಾ.ವೈ ಭರತ್ ಶೆಟ್ಟಿ

ಉಡುಪಿ:ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತುಹಾಕಲು ಸಮಾಜದ ಸಹಕಾರ ಮುಖ್ಯ – ಶಾಸಕ ಡಾ.ವೈ ಭರತ್ ಶೆಟ್ಟಿಪ್ರಧಾನಿ ನರೇಂದ್ರ ಮೋದಿಯವರು ಡ್ರಗ್ಸ್ ಜಾಲವನ್ನು ದೇಶದಿಂದಲೇ ಕಿತ್ತು ಹಾಕಲು ಸಂಕಲ್ಪಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಆದರೆ ಸರಕಾರ ಮತ್ತು ಪೊಲೀಸ್ ಇಲಾಖೆಯಿಂದ ಮಾತ್ರ ಈ ಕೆಲಸ ಆಗುವಂತದ್ದಲ್ಲ. ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದವರು ಮಾಡುತ್ತಿರುವ ಈ ಅಭಿಯಾನದಲ್ಲಿ ಸಮಾಜ, ಶಿಕ್ಷಕರು, ಮಕ್ಕಳ ಪೋಷಕರು ಕೂಡ ಸಹಕರಿಸಿದರೆ ಡ್ರಗ್ಸ್ ಮುಕ್ತ ದೇಶವನ್ನಾಗಿ ಮಾಡಲು ಸಾಧ್ಯ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು.

ಅವರು ಭಾಜಪಾ ಯುವ ಮೋರ್ಚಾ ವತಿಯಿಂದ ಉಡುಪಿ ಜಿಲ್ಲೆಯ ಮಣಿಪಾಲದ ಟೈಗರ್ ಸರ್ಕಲ್ ನಲ್ಲಿ ನಡೆದ ಡ್ರಗ್ಸ್ ಮುಕ್ತ ಉಡುಪಿ ಅಭಿಯಾನದ ಅಂಗವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಬಾಜಪ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ಹಾಗೂ ಉಡುಪಿ ಜಿಲ್ಲೆಯ ಪಕ್ಷದ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು , ಸ್ಥಳೀಯ ಭಾಗದ ಕಾರ್ಯಕರ್ತರು ಜೊತೆಗಿದ್ದರು.

Leave a Reply