ಹಿಜಾಬ್ ವಿವಾದ-ಎಲ್ಲಾ ಕಾಲೇಜಿಗೂ ಒಂದೇ ನಿಯಮ-ಸಚಿವ ಎಸ್.ಅಂಗಾರ

ಉಡುಪಿ, ಫೆ.3:ರಾಜ್ಯದಲ್ಲಿ ಒಂದೊಂದು ಕಾಲೇಜಿಗೆ ಒಂದು ನಿಯಮ ಮಾಡಲು ಸಾಧ್ಯವಿಲ್ಲ ಎಲ್ಲರಿಗೂ ಸಮಾನ ನಿಯಮ ಅನ್ವಯವಾಗಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಿಲ್ಲಾಡಳಿತ ಜೊತೆ ಈ ಬಗ್ಗೆ ಚರ್ಚಿಸುತ್ತೇನೆ. ಒಂದೊಂದು ಕಾಲೇಜಿಗೆ ಒಂದೊಂದು ನಿಯಮ ಮಾಡಲು ಸಾಧ್ಯವಿಲ್ಲ. ಸರಕಾರ ಒಂದು ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ.  ಈ ರೀತಿಯ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ ಎಂದರು.
ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಈ ಬಗ್ಗೆ ಮನವಿ ಮಾಡುತ್ತೇನೆ. ಯಾರು ಕೂಡ ತಮಗೆ ಬೇಕಾದಂತೆ ಕಾಲೇಜಿಗೆ ಬರಲು ಅವಕಾಶವಿಲ್ಲ. ಸರಕಾರ ತಜ್ಞರ ಸಮಿತಿಯನ್ನು ಸರ್ಕಾರ ರಚಿಸಿದೆ. ಜಿಲ್ಲಾಡಳಿತದ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.

Leave a Reply