14,15 ರಂದು ಸಂಘ-ಸಿಎಂ ಚುನಾವಣಾ ಚರ್ಚೆ!

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ತಂತ್ರಗಾರಿಕೆ ಹೆಣೆಯುವ ಸಂಬಂಧ ಮುಂದಿನ ವಾರ ಮುಖ್ಯಮಂತ್ರಿ ಸೇರಿದಂತೆ ಆಡಳಿತರೂಢ ಬಿಜೆಪಿಯ ಹಿರಿಯ ನಾಯಕರು ಹಾಗೂ ಸಂಘ ಪರಿವಾರದ ಮುಖಂಡರನ್ನು ಒಳಗೊಂಡ ಮಹತ್ವದ ಚಿಂತನ-ಮಂಥನ ಸಭೆ ನಡೆಯಲಿದೆ. ಈ ತಿಂಗಳ 14 ಮತ್ತು 15 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಚಾಮರಾಜಪೇಟೆಯ ಸಂಘ ಪರಿವಾರದ ಕೇಂದ್ರ ಸ್ಥಳವಾದ “ಕೇಶವ ಕೃಪ” ದಲ್ಲಿ ಸಭೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ.

Leave a Reply