ಬಸವರಾಜ್ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯ ಪೂರ್ವಭಾವಿ ಸಭೆ

ಮುಖ್ಯ ಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಈ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯ ಪೂರ್ವಭಾವಿ ಸಭೆ 2022-23 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಸ್.ಷಡಾಕ್ಷರಿ ಯವರು ಹಾಗೂ ಪದಾಧಿಕಾರಿಗಳ ನಿಯೋಗವು ಭಾಗವಹಿಸಿ ಕೇಂದ್ರ ಮಾದರಿಯ ವೇತನ ಜಾರಿ ಹಾಗೂ ಎನ್. ಪಿ. ಎಸ್.ರದ್ದುಗೊಳಿಸುವ ಸಂಬಂಧ ಅಂಕಿಅಂಶಗಳೊಂದಿಗೆ ಪ್ರಸ್ತಾವನೆಯನ್ನು ಮಂಡಿಸಿದರು .

ರಾಜ್ಯ ಸರಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಪರಿಷ್ಕರಣೆಗಾಗಿ ಅಧಿಕಾರಿಗಳ ವೇತನ ಸಮಿತಿ ರಚಿಸಲು ತಾತ್ವಿಕ ಒಪ್ಪಿಗೆ ಸೂಚಿಸಿ, ಆಯವ್ಯಯದಲ್ಲಿ ಪ್ರಸ್ತಾಪಿಸುವ ಭರವಸೆಯನ್ನು ನೀಡಿದರು . ಇತ್ತೀಚೆಗೆ ರಾಜಸ್ಥಾನ ಸರಕಾರವು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಘೋಷಿಸಿದ್ದು ಅದರಂತೆ ಅಧ್ಯಯನ ನಡೆಸಿ ಒ.ಪಿ.ಎಸ್ ಜಾರಿಗೆ ತರುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ನೌಕರರ ಮೇಲಿನ ಹಲ್ಲೆಗಳನ್ನು ನಿಯಂತ್ರಿಸಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ತಂದು ಜಾಮೀನುರಹಿತ ಬಂಧನದಂತಹ ಕಠಿಣ ಕಾನೂನನ್ನು ಜಾರಿಗೆ ತರುವ ಭರವಸೆ ನೀಡಿದರು . ನೌಕರರುಗಳ ತರಬೇತಿಗಾಗಿ ಆರು ಜಿಲ್ಲಾ ತರಬೇತಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅನುಭವಿ ವಿಷಯ ತಜ್ಞರನ್ನು ನೇಮಿಸುವ ಮೂಲಕ ಪುನಶ್ಚೇತನಗೊಳಿಸುವ ಭರವಸೆ ನೀಡಿದರು ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗಳಾದ ಶ್ರೀ ಐ.ಎಸ್. ಎನ್. ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳು ಶ್ರೀ ಮಂಜುನಾಥ ಪ್ರಸಾದ್ , ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಸಿ. ಜಾಫರ್ , ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಹೇಮಲತಾ ರವರು ಉಪಸ್ಥಿತರಿದ್ದರು

Leave a Reply